ದತ್ತಾತ್ರೇಯ
From Wikipedia, the free encyclopedia
ದತ್ತಾತ್ರೇಯನು ಹಿಂದೂಗಳಿಂದ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರ ಅವತಾರನಾದ ದೇವರೆಂದು ಪರಿಗಣಿಸಲ್ಪಡುತ್ತಾನೆ. ದತ್ತ ಶಬ್ದದ ಅರ್ಥ "ಕೊಟ್ಟಿದ್ದು", ತ್ರಿಮೂರ್ತಿಗಳು ತಮ್ಮನ್ನು ತಾವೇ ಋಷಿ ದಂಪತಿಗಳಾದ ಅತ್ರಿ ಮತ್ತು ಅನಸೂಯೆಯರಿಗೆ ಪುತ್ರನ ರೂಪದಲ್ಲಿ ಅರ್ಪಿಸಿದ್ದರಿಂದ ದತ್ತನೆಂದು ಕರೆಯಲ್ಪಡುತ್ತಾನೆ. ಅವನು ಅತ್ರಿಯ ಪುತ್ರ, ಹಾಗಾಗಿ "ಆತ್ರೇಯ"ನೆಂಬ ಹೆಸರು.
ದತ್ತಾತ್ರೇಯ दत्तात्रेय | |
---|---|
ದೇವನಾಗರಿ | दत्तात्रेय |
ಸಂಸ್ಕೃತ ಲಿಪ್ಯಂತರಣ | Dattātreya |
ಸಂಲಗ್ನತೆ | ತ್ರಿಮೂರ್ತಿ ಗಳ ಅವತಾರ |
ಮಂತ್ರ | ಹರಿ ಓಂ ತತ್ಸತ್ ಜೈ ಗುರುದತ್ತ |
ಈ ಲೇಖನ ಅಥವಾ ವಿಭಾಗವನ್ನು ಮಾರ್ಗದರ್ಶಿ ವಿನ್ಯಾಸ ಮತ್ತು ಕೈಪಿಡಿಯ ಶೈಲಿ ಪುಟಗಳಲ್ಲಿ ಸೂಚಿಸಿರುವಂತೆ ವಿಕೀಕರಣ (format) ಮಾಡಬೇಕಿದೆ. ವಿಕೀಕರಣದ ನಂತರ ಈ ಟೆಂಪ್ಲೇಟನ್ನು ತೆಗೆದುಹಾಕಿ. |
ದತ್ತಾತ್ರೇಯ ಸ್ವಾರೋಚಿಷ ಮನ್ವಂತರದ ಸಪ್ತರ್ಷಿಗಳಲ್ಲಿ ಒಬ್ಬ. ದೂರ್ವಾಸ ಮುನಿ ಈತನ ಸಹೋದರ. ನಿಮಿ ಋಷಿ ಈತನ ಮಗ. ಏಳನೆಯ ದಿವಸದಲ್ಲಿಯೇ ಈತ ತಾಯಿಯ ಗರ್ಭದಲ್ಲಿ ಪ್ರಕಟವಾಗಿ ತಂದೆಗೆ ಸಹಾಯ ಮಾಡಿದನೆಂದು ಕಥೆಯಿದೆ.
ದತ್ತಾತ್ರೇಯನ ಜನನವೃತ್ತಾಂತ ಹೀಗಿದೆ. ಅತ್ರಿಮುನಿ ಸಂತಾನಾರ್ಥವಾಗಿ ಉಗ್ರ ತಪಸ್ಸು ಮಾಡಿದ. ಈತನ ತಪಸ್ಸಿಗೆ ಮೆಚ್ಚಿ ತ್ರಿಮೂರ್ತಿಗಳು ದರ್ಶನ ನೀಡಿದರು. ತಮ್ಮ ಒಬ್ಬೊಬ್ಬರ ಅಂಶದಿಂದಲೂ ಒಬ್ಬೊಬ್ಬ ಮಗ ಹುಟ್ಟುವನೆಂದು ವರ ನೀಡಿದರು. ಅದರಂತೆ ಬ್ರಹ್ಮನ ಅಂಶದಿಂದ ಚಂದ್ರನೂ ವಿಷ್ಣುವಿನ ಅಂಶದಿಂದ ದತ್ತಾತ್ರೇಯನೂ ಶಿವನ ಅಂಶದಿಂದ ದುರ್ವಾಸನೂ ಜನಿಸಿದರು. ಕಾರ್ತವೀರ್ಯ, ಪ್ರಹ್ಲಾದ ಮೊದಲಾದವರಿಗೆ ದತ್ತಾತ್ರೇಯ ಜ್ಞಾನೋಪದೇಶ ಮಾಡಿದ. ಈತ ಬ್ರಹ್ಮಚಾರಿಯೆಂದು ಹೇಳಲಾಗಿದೆ. [1]
ದೇವತೆಗಳು ರಾಕ್ಷಸರ ಹಿಂಸೆಯನ್ನು ತಡೆಯಲಾರದೆ ದತ್ತಾತ್ರೇಯನಲ್ಲಿ ಮೊರೆಯಿಟ್ಟಾಗ ಅವರಿಗೆ ತನ್ನ ಆಶ್ರಮದಲ್ಲಿ ಈತ ಆಶ್ರಯ ಕೊಟ್ಟ. ರಾಕ್ಷಸರು ಹೊಂಚು ಹಾಕಿ ಈತನ ಆಶ್ರಮದಲ್ಲಿದ್ದ ಲಕ್ಷ್ಮಿಯನ್ನು ಅಪಹರಿಸಿದರು. ಆಗ ಈತ ತನ್ನ ತಪೋಮಹಿಮೆಯಿಂದ ರಾಕ್ಷಸರನೆಲ್ಲ ನಾಶ ಮಾಡಿದ. ಈ ವಿಚಾರ ಭಾಗವತ ಹಾಗೂ ಮಾರ್ಕಂಡೇಯ ಪುರಾಣಗಳಲ್ಲಿ ಉಲ್ಲೇಖಿತವಾಗಿದೆ.
ಮುಂಬಯಿ-ಮದ್ರಾಸು ರೈಲ್ವೆಮಾರ್ಗದಲ್ಲಿರುವ ಗಾಣಗಾಪುರ ಪ್ರಸಿದ್ಧ ದತ್ತಕ್ಷೇತ್ರವೆನಿಸಿದೆ. ಈ ಕ್ಷೇತ್ರದ ಪಕ್ಕದಲ್ಲಿ ಭೀಮಾನದಿ ಹರಿಯುತ್ತಿದೆ. ಇಲ್ಲಿ ದತ್ತಾತ್ರೇಯನ ಸಗುಣ ಪಾದುಕೆಗಳಿವೆ ಎನ್ನಲಾಗಿದೆ. ಪ್ರತಿ ಹುಣ್ಣಿಮೆಯಲ್ಲಿಯೂ ಇಲ್ಲಿ ಉತ್ಸವವಿರುತ್ತದೆ.[2]
ದತ್ತಾತ್ರೇಯ ಎಂದಾಗ ನೆನಪಾಗುವುದು ಇಡೀ ಸಮಷ್ಟಿಯನ್ನೇ ತನ್ನ ಗುರುವೆಂದು ಭಾವಿಸಿದ ಶ್ರೇಷ್ಠ ಅರಿವಿನ ಭಾವ.