ಮುಖ್ಯ ಪುಟ
ವಿಕಿಮೀಡಿಯ ಯೋಜನೆಯ ಮುಖ್ಯ ಪುಟ / From Wikipedia, the free encyclopedia
ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ
ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ.
ಪ್ರಸ್ತುತ ಕನ್ನಡ ಆವೃತ್ತಿಯು ೩೨,೧೬೫ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ. |
|
ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)
ವಿಶೇಷ ಲೇಖನ
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.
ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಆಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
ಈ ತಿಂಗಳ ಪ್ರಮುಖ ದಿನಗಳು
- ಜೂನ್ ೧: ವಿಶ್ವ ಹಾಲು ದಿನ
- ಜೂನ್ ೩: ವಿಶ್ವ ಬೈಸಿಕಲ್ ದಿನ
- ಜೂನ್ ೪: ಹಾಲೇಶ್ ನವುಲೆ ಜನ್ಮದಿನ
- ಜೂನ್ ೫: ವಿಶ್ವ ಪರಿಸರ ದಿನ, ಕಬೀರ್ ಜಯಂತಿ
- ಜೂನ್ ೭: ವಿಶ್ವ ಸಾಗರ ದಿನ
- ಜೂನ್ ೧೨: ಬಾಲ ಕಾರ್ಮಿಕರ ವಿರುದ್ಧ ವಿಶ್ವ ದಿನ.
- ಜೂನ್ ೧೨: ಫಿಲಿಪ್ಪೀನ್ಸ್ ದೇಶದ ಸ್ವಾತಂತ್ರ್ಯ ದಿನಾಚರಣೆ.
- ಜೂನ್ ೧೫: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಸ್ಥಾಪನೆಯ ವಾರ್ಷಿಕೋತ್ಸವ.
- ಜೂನ್ ೧೮: ಗೋವಾ ವಿಮೋಚನೆ ದಿನ, ವಿಶ್ವ ತಂದೆಯರ ದಿನ
- ಜೂನ್ ೨೦: ವಿಶ್ವ ನಿರಾಶ್ರಿತರ ದಿನ .
- ಜೂನ್ ೨೧: ಅಂತಾರಾಷ್ಟ್ರೀಯ ಯೋಗ ದಿನ , ವಿಶ್ವ ಸಂಗೀತ ದಿನ
- ಜೂನ್ ೨೬: ವಿಶ್ವ ಮಾದಕ ವಸ್ತು ನಿರ್ಮೂಲನಾ ದಿನ, ತುರ್ತು ಪರಿಸ್ಥಿತಿ ವಿರೋಧಿ ದಿನ
- ಜೂನ್ ೨೭: ವಿಶ್ವ ಮಧುಮೇಹ ದಿನ (ಚಿತ್ರಿತ)
- ಜೂನ್ ೨೮: ಬಡತನ ದಿನ
- ಜೂನ್ ೨೯: ಬಕ್ರಿದ್ ಹಬ್ಬ