ಜನರಲ್ ಕೆ ಎಸ್ ತಿಮ್ಮಯ್ಯ
From Wikipedia, the free encyclopedia
ಜನರಲ್ ಕೊಡಂದೆರ ಸುಬ್ಬಯ್ಯ ತಿಮ್ಮಯ್ಯ, PB, DSO,ಅವರು ೧೯೫೭ರಿಂದ ೧೯೬೧ರವರೆಗೆ ಭಾರತದ ಭೂಸೇನೆಯ ದಂಡನಾಯಕರಾಗಿದ್ದರು. ಕೊರಿಯಾ ದೇಶದ ಯುದ್ಧಾನಂತರ ಸಂಯುಕ್ತ ರಾಷ್ಟ್ರಗಳ ಒಂದು ದಳಕ್ಕೆ ಅಧಿಪತಿಯಾದ್ದು ಯುದ್ಧ ಖೈದಿಗಳ ಸ್ವದೇಶದಲ್ಲಿ ಪುನರ್ವಸತಿಯನ್ನು ಸ್ಥಾಪಿಸುವದರ ಹೊಣೆ ಹೊತ್ತಿದ್ದರು. ಭಾರತೀಯ ಸೇನೆಯಿಂದ ನಿವೃತ್ತರಾದ ಬಳಿಕ ಸಂಯುಕ್ತ ರಾಷ್ಟ್ರಗಳ ಶಾಂತಿ-ಸ್ಥಾಪಕ ಸೈನ್ಯದ ಮುಖ್ಯಸ್ಥರಾಗಿ ಸೈಪ್ರಸ್ನಲ್ಲಿದ್ದರು. ಅಲ್ಲಿದ್ದಗಲೇ ಹೃದಯಸ್ಥಂಭನದಿಂದ ೧೯೬೫ರಲ್ಲಿ ನಿಧನರಾದರು.