ಸುಬ್ರಹ್ಮಣ್ಯ ಸ್ವಾಮಿ
From Wikipedia, the free encyclopedia
ಕಾರ್ತಿಕೇಯನು ಹಿಂದೂಗಳಲ್ಲಿ ಜನಪ್ರಿಯನಾಗಿರುವ ಒಬ್ಬ ಹಿಂದೂ ದೇವತೆ, ಮತ್ತು ವಿಶೇಷವಾಗಿ ದಕ್ಷಿಣ ಭಾರತ , ಸಿಂಗಾಪೂರ್, ಶ್ರೀಲಂಕಾ, ಮಲೇಷ್ಯಾ ಹಾಗೂ ಮಾರೀಷಸ್ಗಳಲ್ಲಿ ಪ್ರಸಿದ್ಧವಾದ ದೇವರು. ಆದರೆ ಶ್ರೀಲಂಕಾದಲ್ಲಿ, ಹಿಂದೂಗಳು ಮತ್ತು ಬೌದ್ಧ ಧರ್ಮೀಯರು ಇಬ್ಬರೂ ಕಾರ್ತಿಕೇಯನಿಗೆ ಮುಡುಪಾಗಿರುವ ಮತ್ತು ದೇಶದ ದಕ್ಷಿಣದಲ್ಲಿರುವ ಒಂದು ಅತ್ಯಂತ ಪವಿತ್ರ ಬೌದ್ಧ ಮತ್ತು ಹಿಂದೂ ಕ್ಷೇತ್ರವಾದ ಕತರಗಾಮಾ ದೇವಸ್ಥಾನವನ್ನು ಪೂಜ್ಯಭಾವದಿಂದ ಕಾಣುತ್ತಾರೆ. ಹಾಗೆಯೆ ಮಲೇಷ್ಯಾದ ಪಿನಾಂಗ್, ಕ್ವಾಲಾಲಂಪೂರ್ನ ಚೀನೀ ಜನರೂ ಸಹ ಮುರುಗನ್ನನ್ನು ತಾಯ್ಪೂಸಾಮ್ನ ಅವಧಿಯಲ್ಲಿ ಪೂಜಿಸುತ್ತಾರೆ.